ಆಯುಧ ಪೂಜೆ ಸಮಯದಲ್ಲಿ ಅರಿಶಿಣ, ಕುಂಕುಮ ಹಾಗೂ ರಂಗೋಲಿ ನಿಷೇಧಿಸಿದ ಸರ್ಕಾರ!

Dasara,Ayudha Pooja

ಆಯುಧ ಪೂಜೆ ಸಮಯದಲ್ಲಿ ಅರಿಶಿಣ, ಕುಂಕುಮ ಹಾಗೂ ರಂಗೋಲಿ ನಿಷೇಧಿಸಿದ ಸರ್ಕಾರ!
1 / 1

1. ಆಯುಧ ಪೂಜೆ ಸಮಯದಲ್ಲಿ ಅರಿಶಿಣ, ಕುಂಕುಮ ಹಾಗೂ ರಂಗೋಲಿ ನಿಷೇಧಿಸಿದ ಸರ್ಕಾರ!

ದಸರಾ ಆಯುಧ ಪೂಜೆಯಲ್ಲಿ ರಾಸಾಯನಿಕಯುಕ್ತ ಅರಿಶಿಣ, ಕುಂಕುಮ ಹಾಗೂ ಸುಣ್ಣ ಬಳಕೆ ಹಾಗೂ ಬಣ್ಣ ಬಣ್ಣದ ರಂಗೋಲಿ ಹಾಕುವುದನ್ನು ಸರ್ಕಾರ ನಿಷೇಧಿಸಿದೆ.

ನಾಡ ಹಬ್ಬ ದಸರಾದಲ್ಲಿ ಆಯುಧ ಪೂಜೆ ಎನ್ನುವುದು ಭಾರಿ ಪ್ರಮುಖವಾದ ಪೂಜೆಯಾಗಿದೆ. ಈ ವೇಳೆ ಕುಂಬಳಕಾಯಿ ಒಡೆದು ಅದರಲ್ಲಿ ಅರಿಶಿಣ, ಕುಂಕುಮ, ಸುಣ್ಣ ಹಾಗೂ ಇತರ ಬಣ್ಣವನ್ನು ಹಾಕುವುದು ನಮ್ಮ ಸಂಪ್ರದಾಯವಾಗಿದೆ. ಇನ್ನು ರಂಗೋಲಿ ಹಾಕುವುದು ಕೂಡ ನಮ್ಮ ಸಂಪ್ರದಾಯವಾಗಿದ್ದು, ಬಣ್ಣ ಬಣ್ಣದ ರಂಗೋಲಿ ಹಾಕುವುದಕ್ಕೂ ಸರ್ಕಾರ ನಿಷೇಧವನ್ನು ಹೇರಿದೆ. ಇದಕ್ಕೆ ಬಿಜೆಪಿ ನಾಯಕರಿಂದ ಭಾರಿ ದೊಡ್ಡ ಮಟ್ಟದ ವಿರೋಧವೂ ವ್ಯಕ್ತವಾಗಿದೆ. 

ವಿಧಾನಸೌಧ ವಿಕಾಸಸೌಧ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಸಮಯದಲ್ಲಿ ಕಛೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕವಾಗಿರುತ್ತದೆ. ಆದುದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ 2023ರ ಅಕ್ಟೋಬರ್ ಮಾಹೆಯಲ್ಲಿ ಆಯುಧ ಪೂಜೆ ನೆರವೇರಿಸುವಾಗ ಕಛೇರಿಯ ಒಳಗೆ ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ/ಕುಂಕುಮ/ಅರಿಠಿನ/ಸುಣ್ಣ ಹಾಗೂ ಇನ್ನಿತರ ವಸ್ತುಗಳನ್ನು ಕಡ್ಡಾಯವಾಗಿ ಬಳಸದಂತೆ ಈ ಮೂಲಕ ತಿಳಿಸಲಾಗಿದೆ. ಪೂಜಾ ದಿನದಂದು ಕಛೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಹಾಗೂ ವಿದ್ಯುತ್‌ ಸ್ವಿಚ್‌ಗಳನ್ನು ನಂದಿಸಿ ತೆರಳುವಂತೆ ಸೂಚಿಸಿ, ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ವ್ಯವಸ್ಥಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ.