ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ
Chithra Durga,karnataka
1. ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡಲಾಗುವುದು. ಮತ್ತು ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಡವಾಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ. ಕವಾಡಿಗರಹಟ್ಟಿ ನಿವಾಸಿಗಳಿಗೆ ಮೂರು ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನೀಡುತ್ತೇವೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಆಗಸ್ಟ್ 1 ರಂದು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮರಣ ಮೃದಂಗವೇ ಬಾರಿಸಿತ್ತು. ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ ಆರು ಜನರು ಮೃತಪಟ್ಪಿದ್ದರು. ಅಲ್ಲದೆ ಓರ್ವ ಗರ್ಭಿಣಿಯ ಗರ್ಭಪಾತವಾಗಿತ್ತು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ನೀರಿನಲ್ಲಿ ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆಯಾಗಿತ್ತು. ಆರು ಜನರ ಸಾವಿಗೆ ಕಾಲರಾ ಮಾದರಿಯ ಬ್ಯಾಕ್ಟೀರಿಯ ಕಾರಣ ಎಂದು ವದಿಯಲ್ಲಿ ಉಲ್ಲೇಖವಾಗಿತ್ತು.