ಕಾಡಿದ ಅನಾರೋಗ್ಯ ಕಡಬ ಕಾಲೇಜು ವಿದ್ಯಾರ್ಥಿನಿ ಮೃತ್ಯು,
Kadaba Collage Student Death,
1. ಕಾಡಿದ ಅನಾರೋಗ್ಯ ಕಡಬ ಕಾಲೇಜು ವಿದ್ಯಾರ್ಥಿನಿ ಮೃತ್ಯು,
ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿ ಕಡಬ ತಾಲೂಕಿನ ಎಡಮಂಗಲ ನಿವಾಸಿ ತೃಪ್ತಿ ಮೃತಪಟ್ಟ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಈಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದು, ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜನವರಿ 11ರಂದು ರಾತ್ರಿ ತೃಪ್ತಿ ಇಹಲೋಕ ತ್ಯಜಿಸಿದ್ದಾಳೆ ಎಂದು ತಿಳಿದು ಬಂದಿದೆ.