ಕಾಸರಗೋಡು: ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕಣಕ್ಕೆ,

Kasaragod, Congress Haali Samsada Rajmohan Unnitthan,

ಕಾಸರಗೋಡು: ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕಣಕ್ಕೆ,
1 / 1

1. ಕಾಸರಗೋಡು: ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕಣಕ್ಕೆ,

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್ ರವರನ್ನು ಮತ್ತೆ ಕಣಕ್ಕಿಳಿಸಲಾಗಿದೆ. ಇದರಿಂದ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ನ್ನು ಘೋಷಣೆ ಮಾಡಲಾಗಿದ್ದು, ತ್ರಿಕೋನ ಸ್ಪರ್ಧೆಗೆ ಕಾಸರಗೋಡು ಲೋಕಸಭಾ ಕ್ಷೇತ್ರ ಸಜ್ಜಾಗಿದೆ. ಈ ಬಾರಿ ಚುನಾವಣಾ ದಿನಾಂಕ ಘೋಷಣೆ ಮೊದಲೇ ಅಭ್ಯರ್ಥಿಗಳ ನ್ನು ಘೋಷಿಸಲಾಗಿದೆ. ರಾಜ್ ಮೋಹನ್ ಉಣ್ಣಿ ತ್ತಾನ್ 44 ಸಾವಿರ ಮತಗಳ ಅಂತರದಿಂದ ಸಿಪಿಐಎಂ ನ ಕೆ . ಪಿ ಸತೀಶ್ಚಂದ್ರನ್ ವಿರುದ್ಧ ಗೆಲುವು ಸಾಧಿಸಿದ್ದರು. ಸಿಪಿಐಎಂ ನಿಂದ ಎಂ . ವಿ ಬಾಲಕೃಷ್ಣನ್ ಮಾಸ್ಟರ್ , ಬಿಜೆಪಿಯಿಂದ ಅಶ್ವಿನಿ ಎಂ .ಎಲ್ ರವರನ್ನು ಕಣಕ್ಕಿಳಿಸಲಾಗಿದೆ. ಎರಡೂ ಪಕ್ಷಗಳು ಮೊದಲ ಸುತ್ತಿನ ಪ್ರಚಾರಕ್ಕೆ ದುಮುಕಿದ್ದಾರೆ.ಕಾಂಗ್ರೆಸ್ ಮತ್ತು ಸಿಪಿಐಎಂ ನಡುವೆ ನೇರ ಸ್ಪರ್ಧೆಗೆ ಕಾರಣವಾಗುತ್ತಿರುವ ಕ್ಷೇತ್ರದಲ್ಲಿ ಬಿಜೆಪಿಯೂ ಸದ್ದು ನೀಡಲು ಮುಂದಾಗಿದೆ. 35 ವರ್ಷಗಳ ಬಳಿಕ 2019 ರಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು.