ಪುತ್ತೂರು:ಪ್ರಯಾಣಿಕರೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾರೆ,
Putthur,Bus Accident,
1. ಪುತ್ತೂರು:ಪ್ರಯಾಣಿಕರೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾರೆ,
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನ್ನೂರು ಗ್ರಾಮದ ಗಾಳಿಮುಖದಲ್ಲಿ ನೆನ್ನೆ ಸಂಜೆ ನಡೆದಿದೆ.ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ನಿವಾಸಿ ಕುಂಇರಾಮ ಮನಿಯಾಣಿ (68)ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕೇರಳದ ಅಡೂರಿನಿಂದ ಮುಳ್ಳೇರಿಯ ಕಡೆಗೆ ತೆರಳುತಿದ್ದ ಖಾಸಗಿ ಬಸ್ಸಿನಲ್ಲಿ ಬಂದು ಗಾಳಿಮುಖದಲ್ಲಿ ಇಳಿದ ಅವರು, ಬಸ್ಸಿನ ಎದುರು ಭಾಗದ ಮೂಲಕ ರಸ್ತೆ ದಾಟುತಿದ್ದ ಸಂಧರ್ಭದಲ್ಲಿ ಅವರನ್ನು ಗಮನಿಸದೆ ಚಾಲಕ ಬಸ್ಸು ಚಲಾಯಿಸಿದ್ದು, ಅವರ ಎದೆ ಭಾಗದ ಮೇಲೆಯೇ ಬಸ್ಸಿನ ಚಕ್ರವೊಂದು ಹರಿದು ಹೋಗಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.