ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಸಾವು, ಗಾಂಜಾ ನಶೆಯಿಂದ ಅಪಘಾತ?
Bantwala,Car Acciedent
1. ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಸಾವು, ಗಾಂಜಾ ನಶೆಯಿಂದ ಅಪಘಾತ?
ಬಿಸಿರೋಡಿನ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಇಲ್ಲಿನ ಸ್ಥಳೀಯ ನಿವಾಸಿ ಚೈತ್ರ (22 ) ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ.ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಇವಳಿಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಈಕೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು,ಆದರೆ ಮಧ್ಯ ರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಮದುವೆಗೆ ನಿಶ್ಚಿತಾರ್ಥ ನಡೆದಿತ್ತು. ಚೈತ್ರ ಅವಳು ಖ್ಯಾತ ಮೇಕಪ್ ಆರ್ಟಿಸ್ಟ್ ದಿ. ಭಾಸ್ಕರ್ ಆಚಾರ್ಯ ಅವರ ಮಗಳು. ಚೈತ್ರ ಮಂಗಳೂರಿನ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ರಜಾ ಪಡೆದುಕೊಂಡಿದ್ದಳು. ಇವಳ ಸ್ನೇಹಿತಳ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ತಾಯಿ ಜೊತೆ ಅವಳ ಮನೆಗೆ ಹೋಗುತ್ತಿದ್ದ ವೇಳೆ ಯಮಸ್ವರೂಪಿ ಕಾರು ಇವಳಿಗೆ ಡಿಕ್ಕಿ ಹೊಡೆದಿದೆ. ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ. ಮಾ.3 ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಇದೀಗ ಮದುವೆಯಾಗಿ ಗಂಡನ ಮನೆಗೆ ಹೋಗಬೇಕಿದ್ದ ಯುವತಿಯನ್ನು ಕಾರೊಂದು ಮಸಣ ಸೇರುವಂತೆ ಮಾಡಿದೆ.