ಬೋರ್ವೆಲ್ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು, ಮೂರು ಮಂದಿಗೆ ಗಂಭೀರ ಗಾಯ,
Banglore,Accident,Return Kambala,
1. ಬೋರ್ವೆಲ್ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು, ಮೂರು ಮಂದಿಗೆ ಗಂಭೀರ ಗಾಯ,
ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳವನ್ನು ವೀಕ್ಷಿಸಿ ವಾಪಸ್ ಮಂಗಳೂರಿಗೆ ಹೋಗುವಾಗ ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂರು ಮಂದಿಗೆ ಗಂಭೀರ ಗಾಯ,ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲಿಪ್ ನೇರಿ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಲಾರಿ ಚಾಲಕನನ್ನು ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.