ರಸ್ತೆ ದಾಟುತಿದ್ದಾಗ ಬೈಕ್ ಡಿಕ್ಕಿ ಹೊಡೆದು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು :

Manjeshwar,Accident,

ರಸ್ತೆ ದಾಟುತಿದ್ದಾಗ ಬೈಕ್ ಡಿಕ್ಕಿ ಹೊಡೆದು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು :
1 / 1

1. ರಸ್ತೆ ದಾಟುತಿದ್ದಾಗ ಬೈಕ್ ಡಿಕ್ಕಿ ಹೊಡೆದು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು :

ಮಂಜೇಶ್ವರ :ರಸ್ತೆ ದಾಟುತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೊರ್ವರು ಮೃತಪಟ್ಟಿದ್ದಾರೆ.

ಹೊಸಂಗಡಿ ಎ ಕೆ ಜಿ ಮಂದಿರ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿಗಾರ್ (67) ಮೃತಪಟ್ಟವರು.ಅಕ್ಟೋಬರ್ 10 ರಂದು ಸಂಜೆ 7 ಗಂಟೆಗೆ ಅಂಗಡಿಪದವಿನಲ್ಲಿ ರಸ್ತೆ ದಾಟುತಿದ್ದ ವೇಳೆ ಕಡoಬಾರ್ ಭಾಗದಿಂದ ಹೊಸಂಗಡಿ ಭಾಗಕ್ಕೆ ತೆರಳುತಿದ್ದ ಬೈಕ್ ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರ ಗಾಯಗೊಂಡ ಇವರನ್ನು ಕುಂಬಳೆ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತ ಪಟ್ಟರು.ಇವರು ಈ ಹಿಂದೆ ಹಲವು ವರ್ಷಗಳ ಕಾಲ ಹೊಸಂಗಡಿಯಲ್ಲಿ ಪತ್ರಿಕೆ ವಿತರಕರಾಗಿದ್ದರು.

ಮಂಜೇಶ್ವರ ಪೊಲೀಸರು ಬೈಕ್ ಸವಾರನ ವಿರುದ್ಧ ಕೇಸು ದಾಖಲಿಸಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರಾಮತ್ತಮಜಲ್ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಯಿತು.