ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮದಿನಾಚರಣೆ ಮಾ.23ರಂದು ಮಂಜೇಶ್ವರದಲ್ಲಿ,

Manjeshwara,Rastra Kavi Govidapai Birthday Celebration,

ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮದಿನಾಚರಣೆ ಮಾ.23ರಂದು ಮಂಜೇಶ್ವರದಲ್ಲಿ,
1 / 1

1. ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮದಿನಾಚರಣೆ ಮಾ.23ರಂದು ಮಂಜೇಶ್ವರದಲ್ಲಿ,

ಮಂಜೇಶ್ವರ: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ಗಿಳಿವಿಂಡು ಕನ್ನಡ ಸಾಹಿತಿಕ, ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ 141ನೇ ಜನ್ಮದಿನಾಚರಣೆಯು ಮಾ.23 ರಂದು ಅಪರಾಹ್ನ 2ಗಂಟೆಗೆ ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮದೊಂದಿಗೆ ನಡೆಯಲಿದೆ. ಕಾಲೇಜಿನ ಪ್ರಾoಶುಪಾಲ ಮೊಹಮ್ಮದ್ ಆಲಿ. ಕೆ. ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ! ಜಯಪ್ರಕಾಶ್ ನಾರಾಯಣ ತೊಟ್ಟೆ ತೋಡಿ ಅಧ್ಯಕ್ಷತೆ ವಹಿಸುವರು ಮತ್ತು ಹಲವು ಗಣ್ಯ ವ್ಯಕ್ತಿಗಳು ಉಪಸ್ಥಿತರಿರುವರು.