ಶಬರಿಮಲೆಯಲ್ಲಿ ಸಹಾಯಕ ಅರ್ಚಕರೊಬ್ಬರು ಕುಸಿದು ಬಿದ್ದು ಸಾವು: ,

Kerala,Shabarimala News,

1. ಶಬರಿಮಲೆಯಲ್ಲಿ ಸಹಾಯಕ ಅರ್ಚಕರೊಬ್ಬರು ಕುಸಿದು ಬಿದ್ದು ಸಾವು: ,

ಪತ್ತನಂತಿಟ್ಟ; ಶಬರಿಮಲೆಯಲ್ಲಿ ಸಹಾಯಕ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ತಮಿಳುನಾಡಿನ ಕುಂಭಕೋಣಂನ ರಾಮ್ ಕುಮಾರ್ (43) ಎಂದು ಗುರುತಿಸಲಾಗಿದೆ.ಇವರು ಇಂದು lಬೆಳಗ್ಗೆ ಕೋಣೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಇವರನ್ನು ಸನ್ನಿಧಾನಂ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಘಟನೆ ಹಿನ್ನೆಲೆಯಲ್ಲಿ ಇಂದು 20 ನಿಮಿಷ ತಡವಾಗಿ ಶುದ್ಧೀಕರಣದ ನಂತರ ದೇವಾಲಯವನ್ನು ತೆರೆಯಲಾಗಿದೆ. ದೇವಸ್ಥಾನ ತೆರೆಯಲು ವಿಳಂಬವಾದ ಕಾರಣ ಯಾತ್ರಾರ್ಥಿಗಳು ಬಹಳ ಹೊತ್ತು ಕಾಯಬೇಕಾಯಿತು.