ಹಲವು ಕ್ರಿಮಿನಲ್ ಕೃತ್ಯದಲ್ಲಿ ಶಾಮೀಲಾಗಿದ್ದ ಕುಖ್ಯಾತ ಕಳ್ಳರಿಬ್ಬರ ಬಂಧನ,

Manglore Criminals Arrested,

ಹಲವು ಕ್ರಿಮಿನಲ್ ಕೃತ್ಯದಲ್ಲಿ ಶಾಮೀಲಾಗಿದ್ದ ಕುಖ್ಯಾತ ಕಳ್ಳರಿಬ್ಬರ ಬಂಧನ,
1 / 1

1. ಹಲವು ಕ್ರಿಮಿನಲ್ ಕೃತ್ಯದಲ್ಲಿ ಶಾಮೀಲಾಗಿದ್ದ ಕುಖ್ಯಾತ ಕಳ್ಳರಿಬ್ಬರ ಬಂಧನ,

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ನಾಟೆಕಲ್ ಸಮೀಪದ ಕಲ್ಕಟ್ಟ ಎಂಬಲ್ಲಿನ  ಅಬ್ದುಲ್ ಫಯಾನ್ (26) ಮತ್ತು ನರಿಂಗಾನ ಸಮೀಪದ ತೌಡುಗೋಳಿ ಕ್ರಾಸ್ ನಿವಾಸಿ ಮೊಯಿದ್ದೀನ್ ಹಫೀಸ್ ಯಾನೆ ಆಬಿ (47) ಬಂಧಿತ ಆರೋಪಿಗಳು.  ಅಬ್ದುಲ್ ಫಯಾನ್ ಎಂಬಾತನು ಕೊಣಾಜೆ, ಉಳ್ಳಾಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ , ಕಡಬ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ಸಹಿತ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಂಜೇಶ್ವರ ಸಮೀಪದ ಮೀಂಜದಿಂದ ಬಂಧಿಸಲಾಗಿದೆ.