ಉಡುಪಿ: ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಹಿನ್ನಲೆಯಲ್ಲಿ ರೋಗಿಗಳಿಗೆ ಫಲವಸ್ತು ವಿತರಿಸಿದ ಕಾಂಗ್ರೆಸ್ ಮುಖಂಡ,
Udupi News,
1. ಉಡುಪಿ: ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಹಿನ್ನಲೆಯಲ್ಲಿ ರೋಗಿಗಳಿಗೆ ಫಲವಸ್ತು ವಿತರಿಸಿದ ಕಾಂಗ್ರೆಸ್ ಮುಖಂಡ,
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಾಗೂ ರಾಮಮಂದಿರ ಉದ್ಘಾಟನೆ ಹಿನ್ನೆಲೆ ದೇಶದಾದ್ಯಂತ ಅನೇಕ ಸಂಘಟನೆಗಳು, ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೇವಾಲಯ, ಭಜನಾಮಂದಿರ ಅನೇಕ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರುತ್ತಿವೆ. ಉಡುಪಿಯಲ್ಲೂ ರಾಮಮಂದಿರದ ಲೋಕಾರ್ಪಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ತಮ್ಮ ಸಂಗಡಿಗರೊಂದಿಗೆ ಉಡುಪಿ ಸರಕಾರಿ ಜಿಲ್ಲಾ ಆಸ್ಪತ್ರೆಗೆ ತೆರಳಿ ರೋಗಿಗಳ ಕಷ್ಟ ಸುಖ ವಿಚಾರಿಸಿ, ಆಸ್ಪತ್ರೆ ರೋಗಿಗಳಿಗೆ ಫಲ ವಸ್ತು ವಿತರಣೆ ಮಾಡಲಾಯಿತು.