ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ; ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್,

Karnataka,Ration Card

1 / 1

1.

 ಸರ್ವರ್ 2 ಮತ್ತು ಸರ್ವರ್ 3ರಲ್ಲಿ ಮಾತ್ರ ತಿದ್ದಪಡಿಗೆ ಅವಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

 ಬಿಪಿಎಲ್​​ ಮತ್ತು ಎಪಿಎಲ್​​​​ ಕಾರ್ಡ್​​​​ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ.ಆದರೆ ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ.ಕೇವಲ ತಿದ್ದುಪಡಿಗೆ ಹೆಚ್ಚಿನ ಸಮಯದ ನೀಡಿ ಎಂದು ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಸರ್ವರ್ 2: ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 16, 17 ಮತ್ತು 18 ನೇ ತಾರೀಖಿನಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ  ಮಾಡಿಕೊಳ್ಳಬಹುದಾಗಿದೆ.

ಸರ್ವರ್​ 3: ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ದಿನಾಂಕ, 19,20, 21ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ನೀಡಿರುವ ದಾಖಾಲೆಗಳು ಸರಿ ಇದ್ದರೇ ಮಾತ್ರ ಕಾರ್ಡ್ ವಿತರಣೆ ಮಾಡಲಾಗುತ್ತದೆ.