ಪಂಚಭೂತಗಳಲ್ಲಿ ಲೀನರಾದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್…..ಗಣ್ಯರಿಂದ ಅಂತಿಮ ನಮನ,

Manglore, Press Reporter Manohar Prasad Anthim Naman,

ಪಂಚಭೂತಗಳಲ್ಲಿ ಲೀನರಾದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್…..ಗಣ್ಯರಿಂದ ಅಂತಿಮ ನಮನ,
1 / 1

1. ಪಂಚಭೂತಗಳಲ್ಲಿ ಲೀನರಾದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್…..ಗಣ್ಯರಿಂದ ಅಂತಿಮ ನಮನ,

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ  ಕದ್ರಿ ಚಿತಾಗಾರದಲ್ಲಿ ನಡೆಸಲಾಗಿದೆ. ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಮನೋಹರ್ ಪ್ರಸಾದ್ ಅವರ ಸಾವಿನ ಸುದ್ದಿ ಕೇಳಿ ಹಲವಾರು ಅಭಿಮಾನಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಶಾಸಕರು , ಸಂಸದರು, ಹಾಗೂ ಹಲವು ಗಣ್ಯರು ಆಗಮಿಸಿ ಪಾರ್ಥಿವ ಶರೀರದ ದರ್ಶನ ಪಡೆದು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.ಲೋಬೋ ಲೈನ್‌ನ ನಿವಾಸದಲ್ಲಿ ಕುಟುಂಬಸ್ಥರಿಂದ ಧಾರ್ಮಿಕ ವಿಧಿವಿಧಾನ ಮುಗಿದ ಬಳಿಕ ಮಂಗಳೂರು ಪತ್ರಿಕಾ ಭವನದಲ್ಲಿ ಮೃತರಿಗೆ ಅಂತಿಮ ಗೌರವ ಸಲ್ಲಿಸಲಾಗಿದೆ. ಜಿಲ್ಲಾ ಪತ್ರಕರ್ತ ಸಂಘ ಹಾಗೂ ಪ್ರೆಸ್‌ಕ್ಲಬ್‌ ಮತ್ತು ಪತ್ರಿಕಾ ಭವನ ಟ್ರಸ್ಟ್‌ ವತಿಯಿಂದ ಮನೋಹರ್ ಪ್ರಸಾದ್ ಅವರಿಗೆ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಲಾಗಿದೆ. ವೃತ್ತಿ ಜೀವನದಲ್ಲಿ ಅಪಾರ ಸ್ನೇಹಿತರನ್ನು ಸಂಪಾದಿಸಿದ್ದ ಮನೋಹರ್ ಪ್ರಸಾದ್ ಅವರ ಅಂತಿಮ ಯಾತ್ರೆಯಲ್ಲೂ ಸಾಕಷ್ಟು ಜನ ಭಾಗವಹಿಸಿ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ಕ್ಲಬ್‌ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್‌ ರಾಮಕೃಷ್ಣ ಸೇರಿದಂತೆ ಹಲವು ಪತ್ರಕರ್ತರು ಉಪಸ್ಥಿತರಿದ್ದು, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರಿಗೆ ಅಂತಿಮ ಗೌರವ ಸಲ್ಲಿಸಿ ಶೃದ್ಧಾಂಜಲಿ ಕೋರಿದ್ದಾರೆ.