ಪೈವಳಿಕೆ ಬಳಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದ ಪ್ರಕರಣ: ಆರೋಪಿ ಖುಲಾಸೆ,

Kasaragod,Paivalike Murder Case,

ಪೈವಳಿಕೆ ಬಳಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದ ಪ್ರಕರಣ: ಆರೋಪಿ ಖುಲಾಸೆ,
1 / 1

1. ಪೈವಳಿಕೆ ಬಳಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದ ಪ್ರಕರಣ: ಆರೋಪಿ ಖುಲಾಸೆ,

ಕಾಸರಗೋಡು: ಪೈವಳಿಕೆ ಬಾಯಾರು ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಕಾಸರಗೋಡು ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಫು ನೀಡಿದೆ. ಬಾಯಾರು ಸುದೆಂಬಲದ ರೇವತಿ ( 60), ವಿಠಲ (75), ಬಾಬು (68) ಮತ್ತು ಸದಾಶಿವ (50) ಕೊಲೆ ಗೆ ಸಂಬಂಧಪಟ್ಟಂತೆ ಮಂಗಳವಾರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ಆರೋಪಿಯಾಗಿದ್ದ ಉದಯ(45)ನನ್ನು ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ . ಪ್ರಕರಣದ ವಿಚಾರಣೆ ವೇಳೆ ಆರೋಪಿ ಮಾನಸಿಕ ಅಸ್ವಸ್ಥತೆ ಬಗ್ಗೆ ಚಿಕಿತ್ಸಾ ದಾಖಲೆಗಳನ್ನು ಆರೋಪಿ ಪರ ನ್ಯಾಯವಾದಿ ಹಾಜರುಪಡಿಸಿದ್ದು, ಚಿಕಿತ್ಸೆ ನೀಡಿದ್ದ ವೈದ್ಯರನ್ನು ನ್ಯಾಯಾಲಯ ಕರೆಸಲಾಗಿತ್ತು. ಚಿಕಿತ್ಸೆ ಮುಂದುವರಿಸಲು ಉದಯನನ್ನು ಮಾನಸಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯುವಂತೆ ನ್ಯಾಯಾಲಯ ಆದೇಶ ನೀಡಿದೆ.