ಪೊಲೀಸ್ ಇಲಾಖೆ ಹಾಗೂ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ದ ಹಿಂಜಾವೇ ಬೃಹತ್ ಪ್ರತಿಭಟನೆ,

Bantwala Rama bhakthas Strike,

ಪೊಲೀಸ್ ಇಲಾಖೆ ಹಾಗೂ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ದ ಹಿಂಜಾವೇ ಬೃಹತ್ ಪ್ರತಿಭಟನೆ,
1 / 1

1. ಪೊಲೀಸ್ ಇಲಾಖೆ ಹಾಗೂ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ದ ಹಿಂಜಾವೇ ಬೃಹತ್ ಪ್ರತಿಭಟನೆ,

ಬಂಟ್ವಾಳ : ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಸಹಿತ ಕಾರ್ಯಕರ್ತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಿ ಎಂದು ಆಗ್ರಹ ಮಾಡಿದರು. ಬಿಡುಗಡೆ ಮಾಡುವ ಕೆಲಸ ಮಾಡದೆ ಮತ್ತೆ ಮತ್ತೆ ಹಿಂದೂ ಕಾರ್ಯಕರ್ತರನ್ನು ಕೆಣಕಲು ಹೋದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು‌.ಅಯೋಧ್ಯೆಯ ಸಂಭ್ರಮದಲ್ಲಿರುವ ಹಿಂದೂ ಸಮಾಜದ ಮೇಲೆ ಸಿದ್ದರಾಮಯ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು. ಪ್ರತಿ ಬಾರಿ ಹಿಂದೂ ಸಮಾಜದ ಮೇಲೆ ನಡೆಯುವ ದಾಳಿಯನ್ನು ಖಂಡಿಸುತ್ತೇವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.