ಬೆಳ್ತಂಗಡಿ; ಮರ ಕಡಿಯುವ ವೇಳೆ, ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ವ್ಯಕ್ತಿ ಮೃತ್ಯು,

Belthangadi, Man Daied,

ಬೆಳ್ತಂಗಡಿ;  ಮರ ಕಡಿಯುವ ವೇಳೆ, ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ  ವ್ಯಕ್ತಿ ಮೃತ್ಯು,
1 / 1

1. ಬೆಳ್ತಂಗಡಿ; ಮರ ಕಡಿಯುವ ವೇಳೆ, ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ವ್ಯಕ್ತಿ ಮೃತ್ಯು,

ಮರ ಕಡಿಯುವ ವೇಳೆ, ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ಗರಗಸ ಕುತ್ತಿಗೆಗೆ ಸಿಲುಕಿ ಬೆಳ್ತಂಗಡಿಯ ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46)ಸಾವನ್ನಪ್ಪಿರುವ ಘಟನೆ  ನಡೆದಿದೆ. ಮನೆಗೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಅವರು ಸಹೋದರ ಪ್ರಮೋದ್ ಜೊತೆ ಸೇರಿ ಡಿ.19 ರಂದು ಬೆಳಗ್ಗೆ 11:30ರ ಕಟ್ಟಿಂಗ್ ಮಿಷಿನ್ ಮೂಲಕ ಮರ ಕಡಿಯುತ್ತಿದ್ದರು. ಈ ವೇಳೆ ಮಿಷಿನ್ ಜೊತೆಗೆ ಪ್ರಶಾಂತ್ ಹಿಡಿತ ತಪ್ಪಿ ಕೆಳಕ್ಕೆ ಬಿದ್ದಿದ್ದು ಚಲನೆ ಸ್ಥಿತಿಯಲ್ಲಿ ಮಿಷಿನ್ ನ ಗರಗಸ ಆಕಸ್ಮಿಕವಾಗಿ ಕುತ್ತಿಗೆಗೆ ತಾಗಿ ಗಂಭೀರ ಗಾಯಗಳಾಗಿದೆ.ತಕ್ಷಣ ಸ್ಥಳೀಯ ಆಸ್ಪತೆಗೆ ದಾಖಲಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.