ಮಂಜೇಶ್ವರ ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ‌ ನೂತನ ಕಟ್ಟಡ ಲೋಕಾರ್ಪಣೆ,

Manjeshwar Agriculture Bank Inogaration,

ಮಂಜೇಶ್ವರ ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ‌ ನೂತನ ಕಟ್ಟಡ ಲೋಕಾರ್ಪಣೆ,
1 / 1

1. ಮಂಜೇಶ್ವರ ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ‌ ನೂತನ ಕಟ್ಟಡ ಲೋಕಾರ್ಪಣೆ,

ಉಪ್ಪಳ : ಮಂಜೇಶ್ವರ ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗೆ ನಯಾ ಬಝಾರ್ ನ ಅಂಬಾರು ಚೆರುಗೋಳಿ ರಸ್ತೆ ಸಮೀಪ ನಿರ್ಮಿಸಿದ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಫೆ.9ಕ್ಕೆ ಬೆಳಗ್ಗೆ 9.30 ಗಂಟೆಗೆ ಕೇರಳ ವಿಧಾನಸಭಾ ವಿಪಕ್ಷ ನಾಯಕ ವಿ.ಡಿ‌.ಸತೀಶನ್ ಉದ್ಘಾಟಿಸುವರು. ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಅಧ್ಯಕ್ಷತೆವಹಿಸುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸುವರು. ಉದುಮ ಶಾಸಕ ಸಿ.ಎಚ್.ಕುಂಞಿಂಬು,ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು,ಕೇರಳ ರಾಜ್ಯ ಸಹಕಾರಿ ಕೃಷಿ ಗ್ರಾಮಾಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ನ್ಯಾಯವಾದಿ ಸಿ.ಕೆ.ಶಾಜಿ ಮೋಹನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನೀಲಕಂಠನ್, ಸಾಬು ಅಬ್ರಹಾಂ, ಅಬ್ದುಲ್ ಶುಕೂರ್ ನಾಹಾ, ರೆಮಾ ಎ, ಸುರೇಶ್ ಕುಮಾರ್ ಪಿ.ವಿ, ಮಂಜೇಶ್ವರ ಬ್ಲೋಕ್ ಪಂ.ಅಧ್ಯಕ್ಷೆ ಶಮೀನಾ ಟೀಚರ್, ಮಂಗಲ್ಪಾಡಿ ಗ್ರಾ.ಪಂ.ಅಧ್ಯಕ್ಷೆ ರುಬಿನಾ ನೌಫಲ್, ಜಿ.ಪಂ.ಸದಸ್ಯ ಗೋಲ್ಡನ್ ಅಬ್ದುಲ್ ರಹಿಮಾನ್, ಕೋಆಪರೇಟಿವ್ ಯೂನಿಯನ್ ಕಾಸರಗೋಡು ಸರ್ಕಲ್ ಅಧ್ಯಕ್ಷ ಕೆ.ಆರ್.ಜಯಾನಂದ, ಪಿ.ವಿ.ಸುರೇಶ್, ಸೆಬಾಸ್ಟಿನ್ ಪಾತಲಿಲ್, ಚಂದ್ರನ್ ವಿ, ನಾಗೇಶ ಕೆ, ಕೆ.ಮೊಹಮ್ಮದ್ ಸಾಲಿಲ್, ಶ್ರೀವಿದ್ಯಾ ವಿ.ವಿ, ದಿವ್ಯಾ ಕೆ.ಬಿ, ಸೋಜನ್ ಜೋಸೆಫ್, ರವಿ ಪ್ರಸಾದ್,ಬಾಬು ಬಂದ್ಯೋಡು ಮೊದಲಾದವರು ಶುಭಾಶಂಸನೆಗೈಯುವರು. ಡಿಸಿಸಿ ಪ್ರಧಾನ ಕಾರ್ಯದರ್ಶಿ, ಎಣ್ಮಕಜೆ ಗ್ರಾಮ ಪಂಚಾಯತು ಅಧ್ಯಕ್ಷ ಹಾಗೂ ಮಂಜುನಾಥ ಆಳ್ವ ಮಡ್ವ ಉಪಾಧ್ಯಕ್ಷರಾಗಿರುವ ಬ್ಯಾಂಕ್ ಆಡಳಿತ ಸಮಿತಿ ನೇತೃತ್ವದಲ್ಲಿ ಪುರೋಗಮನ ಸಾಧನೆಗಳನ್ನುಗೈದಿರುವ ಬ್ಯಾಂಕ್ ಇದೀಗ ನೂತನ‌ ಕಟ್ಟಡದಲ್ಲಿ ಉದ್ಘಾಟನೆಗೊಳ್ಳುತ್ತಿದ್ದು ಕೃಷಿ ಹಾಗೂ ಗ್ರಾಮೀಣ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಕಾರ್ಯ ಪ್ರವೃತ್ತಿಸುವುದಾಗಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ್ ಜೆ.ಎಸ್, ಕಾರ್ಯದರ್ಶಿ ಶರತ್ ಕುಮಾರ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.