ಮಂಜೇಶ್ವರದ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದ್ದ ಮೃತ ದೇಹದ ಗುರುತು ಪತ್ತೆ,
Manjeshwar Koppala Dead Body Identified,
1. ಮಂಜೇಶ್ವರದ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದ್ದ ಮೃತ ದೇಹದ ಗುರುತು ಪತ್ತೆ,
ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಪತ್ತೆಯಾದ ಮೃತ ದೇಹ ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ (20) ಎ0ದು ಗುರುತು ಪತ್ತೆ ಹಚ್ಚಲಾಗಿದೆ. ಈತ ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯಾಗಿದ್ದು, ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರ ದಲ್ಲಿರಿಸಲಾಗಿದ್ದ ಮೃತ ದೇಹದ ಗುರುತನ್ನು ಕುಟುಂಬಸ್ಥರು ಪತ್ತೆ ಹಚ್ಚಿದ್ದಾರೆ. ಬುಧವಾರ ಸಂಜೆ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಅಪರಿಚಿತ ಯುವಕನ ಮೃತ ದೇಹ ಪತ್ತೆಯಾಗಿತ್ತು. ಮೃತ ದೇಹದ ಗುರುತು ಪತ್ತೆ ಮಂಜೇಶ್ವರ ಠಾಣಾ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದರು.ಇನ್ನು ನಾಪತ್ತೆಯಾದವರ ಬಗ್ಗೆ ತನಿಖೆ ನಡೆಸಲಾಗಿತ್ತು. ಇಹಾಬ್ ಕೆಲ ದಿನಗಳ ಹಿಂದೆ ತಲಪಾಡಿ ಪರಿಸರದಲ್ಲಿರುವ ಸಂಬಂಧಿಕರ ಮನೆಗೆ ತಲಪಿದ್ದರು. ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸುತ್ತಿ ದ್ದಂತೆ ಬುಧವಾರ ಸಂಜೆ ಕೊಪ್ಪಳ ನದಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.