ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ,

Sulya Grower Suicied,

ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ,
1 / 1

1. ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ,

ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ.ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.