ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ದೊಡ್ಡ ದೊಡ್ಡವರ ಹೆಸರು ಹೊರಗೆ ಬರುತ್ತೆ: ಆರೋಪಿ ಚೈತ್ರಾ ಕುಂದಾಪುರ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಬಂಧನಕಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಸಿಸಿಬಿ ವಶಕ್ಕೆ ಒಪ್ಪಿಸಲಾಗಿದೆ. ಈ ನಡುವೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,ʼʼ ಸ್ವಾಮೀಜಿ ಬಂಧನವಾಗಲಿ, ಸತ್ಯ ಹೊರ ಬರುತ್ತೆ, ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆʼʼ ಎಂಬ ಅಂಶವನ್ನು ಬಿಚ್ಚಿಟ್ಟಿದ್ದಾಳೆ.

1 / 1

1.