’20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಇದೆ’- ಸಚಿವ ಚಲುವರಾಯಸ್ವಾಮಿ,

Bengalore Cheluvaraya Swami ,

’20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಇದೆ’- ಸಚಿವ ಚಲುವರಾಯಸ್ವಾಮಿ,
1 / 1

1. ’20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಇದೆ’- ಸಚಿವ ಚಲುವರಾಯಸ್ವಾಮಿ,

 ಬಿಜೆಪಿ ರೀತಿ ನಾವು 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. 20 ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕೆಂಬ ಗುರಿ ಇದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೆಯೊ ಅದನ್ನು ಉಸ್ತುವಾರಿ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. 28 ಕ್ಷೇತ್ರಗಳನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ತೀವಿ. 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂಬ ಭರವಸೆ ಇದೆ ಎಂದು ಅವರು ತಿಳಿಸಿದ್ದಾರೆ. ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರ ಚರ್ಚೆ ನಡೆದಿಲ್ಲ. ರಾಜ್ಯದ ನಾಯಕರು ಮತ್ತು ಹೈಕಮಾಂಡ್ ಹೇಳಿದಂತೆ ಕೆಲಸ ಮಾಡುತ್ತೇವೆ. ಎಲ್ಲರೂ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಒಪ್ಪಿದ್ದೇವೆ. ಇನ್ನು ನಿಗಮಮಂಡಳಿ ವಿಚಾರವಾಗಿ ಯಾವುದೇ ಅಸಮಾಧಾನವಿಲ್ಲ. ಲೋಕಸಭೆ ಚುನಾವಣೆ ಬಹ್ಹೆ ನಮ್ಮ ಗಮನವಿದೆ. ಈ ಕುರಿತಂತೆ ಸ್ಥಳೀಯವಾಗಿ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಅನುಷ್ಠಾನ ಸಮಿತಿ ಕುರಿತು 4 ಸಾವಿರ ಜನ ನಾಮಿನೇಷನ್ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರಿಗೆ ಏನು ಸ್ಥಾನಮಾನ ನೀಡಬೇಕೋ ಅದನ್ನು ನೀಡುತ್ತೇವೆ ಎಂದು ಅವರು ಹೇಳಿದರು.